Saturday 17 July, 2010

ಪಟ್ಟ ಭದ್ರ

ಕುಂಟು ನೆಪದ ಮಿಡತೆ 

ಅಧಿಕಾರದ ಚುಕ್ಕಾಣಿ ಹಿಡಿದಾಗ

ಜೊಲ್ಲು ಸುರಿಸಿ ತೆವಳಿದ 

ಅಳ್ಳೆ ಗುಳ್ಳೆ ಬಸವ

ಸಾರಥಿಯ ಪದವಿ ಪಡೆದು

ಕಸ್ತೂರಿಗೆ ನೊಗವ ಕಟ್ಟಿ

ಊರೆಲ್ಲ ಸುತ್ತಿ ಮರಳುವ ಮುನ್ನ 

ಕತ್ತಲೆಯಲ್ಲಿ ಕಾಗೆಗೆ 

ಕೂಳು ಹಾಕಲಾಗಿತ್ತು.

1 comment:

ಸೀತಾರಾಮ. ಕೆ. / SITARAM.K said...

ಚೆಂದದ ಹೋಲಿಕೆಯ ಅಣುಕು